ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಡ ಅರ್ಚಕರ ಜೀವನಕ್ಕೂ ಕಲ್ಲು

02:32 PM Jan 23, 2024 IST | Samyukta Karnataka

ಬೆಂಗಳೂರು: ರಾಜ್ಯ ಸರ್ಕಾರ, ಬಡ ಅರ್ಚಕರ ಜೀವನಕ್ಕೂ ಕಲ್ಲು ಹಾಕಲು ಹೊರಟಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯದ ಆರ್ಥಿಕತೆಯನ್ನು ಹದೆಗೆಡಿಸಿರುವ ರಾಜ್ಯ ಸರ್ಕಾರ, ಬಡ ಅರ್ಚಕರ ಜೀವನಕ್ಕೂ ಕಲ್ಲು ಹಾಕಲು ಹೊರಟಿದೆ. ರಾಮ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಿರೇಮಗಳೂರಿನ ಶ್ರೀ ಕೋದಂಡ ಕಲ್ಯಾಣರಾಮ ದೇವಾಲಯದ ಅರ್ಚಕರಾದ ಶ್ರೀ ಹಿರೇಮಗಳೂರು ಕಣ್ಣನ್‌ ಅವರಿಗೆ 10 ವರ್ಷದ ಸಂಬಳ ವಾಪಾಸು ಕೊಡುವಂತೆ ಆದೇಶ ಮಾಡಿದೆ. ರಾಜ್ಯದ ಅಭಿವೃದ್ಧಿ ಮಾಡಲಾಗದೇ ಕೈಚೆಲ್ಲಿ ಕುಳಿತಿರುವ ಸಿದ್ದರಾಮಯ್ಯನವರು ಹಿಂದೂ ದೇವಾಲಯಗಳ ಅರ್ಚಕರಿಂದ ವಸೂಲಿಗೆ ಇಳಿದಿರುವುದು ದುರದೃಷ್ಟಕರ. ಸರ್ಕಾರದ ಈ ಕ್ರಮವನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್

Next Article