For the best experience, open
https://m.samyuktakarnataka.in
on your mobile browser.

ಬಡ ಮಕ್ಕಳ ಮೊಟ್ಟೆ ಮಾರಿ ಕಟ್ಟಿದ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ

10:42 PM Apr 25, 2024 IST | Samyukta Karnataka
ಬಡ ಮಕ್ಕಳ ಮೊಟ್ಟೆ ಮಾರಿ ಕಟ್ಟಿದ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ

ಬೆಳಗಾವಿ: ಬಡ ಮಕ್ಕಳ ಮೊಟ್ಟೆ ಮಾರಿ ಬಂದ ಹಣದಿಂದಲೇ ಕಟ್ಟಿದ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ವಾಸ್ತವ್ಯ ಹೂಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏ. ೨೭ರಂದು ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಬಡ ಮಕ್ಕಳ ಮೊಟ್ಟೆ ಮಾರಿ ಬಂದಂತಹ ಹಣದಿಂದ ಕಟ್ಟಿದ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುತ್ತಿರುವುದು ವಿಷಾದನೀಯವಾಗಿದೆ ಎಂದರು.
ಶಶಿಕಲಾ ಜೊಲ್ಲೆ ಅವರು ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಕ್ಕಳ ಹೊಟ್ಟೆ ಸೇರಬೇಕಿದ್ದ ಮೊಟ್ಟೆಗಳನ್ನು ಮಾರಾಟ ಮಾಡಿ ಬಂದತಂಹ ಹಣದಿಂದ ಈ ಹೋಟೆಲ್ ನಿರ್ಮಿಸಿದ್ದಾರೆಂದು ಸುರ್ಜೆವಾಲಾ ದೂರಿದರು.