ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು!

04:10 PM Mar 05, 2024 IST | Samyukta Karnataka
ಸಾಂದರ್ಭಿಕ ಚಿತ್ರ

'ಎಸಿ ರೂಂ ಸಮೀಕ್ಷೆ'ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ 'ಎಸಿ ರೂಂ ಗಿರಾಕಿ'ಗಳದು!

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ' ಏನು ಕಿಸಿಯುತ್ತಿದೆ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕರ್ನಾಟಕ ಕಾಂಗ್ರೆಸ್‌ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು?

ಖೊಟ್ಟಿ_ಗ್ಯಾರಂಟಿ

**
ಹೆಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ' ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ?
**
ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ ವೇತನ, ಭತ್ಯೆಗಳೆಲ್ಲ ವ್ಯರ್ಥವೇ?
ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ… ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ?
**
ಒಬ್ಬ ಕಾರ್ಯಕರ್ತೆಗೆ 120ರಿಂದ 150 ಮನೆ ಹಂಚಿಕೆ ಮಾಡಿದ್ದು, 10–15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ ₹1,000! ಅದೇ 'ಎಸಿ ರೂಂ ಸಮೀಕ್ಷೆ ಗಿರಾಕಿ'ಗಳಿಗೆ ಕೋಟಿ ಕೋಟಿ ಹಣ!!
**
ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! 'ಪಟ್ಟು-ಮಟ್ಟು-ಒಳಗುಟ್ಟು' ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರಕಾರ.
**
ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೋ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ 'ಎಸಿ ರೂಂ ಸಮೀಕ್ಷೆ'ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ 'ಎಸಿ ರೂಂ ಗಿರಾಕಿ'ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು!
**
ಅಂಗನವಾಡಿಗೆ ಬರುವ ಮಕ್ಕಳ ಲಾಲನೆ–ಪಾಲನೆ, ಗರ್ಭಿಣಿಯರು- ಬಾಣಂತಿಯರಿಗೆ ಊಟ, ಪ್ರತಿ ತಿಂಗಳ ಮೊದಲ & 3ನೇ ಶುಕ್ರವಾರ ಪೋಷಣ್‌ ಅಭಿಯಾನ, 3ನೇ ಶನಿವಾರ ಬಾಲವಿಕಾಸ ಸಮಿತಿ ಸಭೆಗೆ ಹಾಜರಿ; ಜತೆಗೆ ಇಲಾಖೆ ನಿಯೋಜಿಸುವ ಕೆಲಸಗಳನ್ನೂ ನಿರ್ವಹಿಸಬೇಕು. ಮಾರ್ಚ್ 3ರಿಂದ ಗ್ಯಾರಂಟಿ ಸಮೀಕ್ಷೆ ಬೇರೆ.
**
ಹಾಗಾದರೆ, ಸಿದ್ದರಾಮಯ್ಯ ಅವರ ಸರಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ? ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ? ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ! ಎಂದಿದ್ದಾರೆ.

Next Article