For the best experience, open
https://m.samyuktakarnataka.in
on your mobile browser.

ಬಸವರಾಜ ಮುತ್ತಗಿಗೆ ಜೀವ ಬೆದರಿಕೆ

12:25 PM Oct 23, 2024 IST | Samyukta Karnataka
ಬಸವರಾಜ ಮುತ್ತಗಿಗೆ ಜೀವ ಬೆದರಿಕೆ

ಧಾರವಾಡಕ್ಕೆ ಬಂದ ಸಿಬಿಐ ಅಧಿಕಾರಿಗಳು

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣಲ್ಲಿ ಬಂಧನಕ್ಕೊಳಗಾಗಿ ಜಾಮೀನು ಮೇಲೆ‌ ಹೊರಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಇದೆ ಎನ್ನಲಾಗಿದೆ.
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಬಸವರಾಜ ಮುತ್ತಗಿಗೆ ಅದೇ ಪ್ರಕರಣದ ರ್ಎ ಆರೋಪಿ ಅಶ್ವತ್ಥ ಎಂಬಾತನಿಂದ ಜೀವ ಬೆದರಿಕೆ ಇದೆ. ಅದಕ್ಕಾಗಿ ತಮಗೆ ರಕ್ಷಣೆ‌ ನೀಡಬೇಕು ಎಂದು ೧೭ನೇ ಎಸಿಎಂಎಂ ಕೋರ್ಟ್‌ನಲ್ಲಿ ೧೬೪(೧)ರಡಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದನು.
ಈ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್ ಅಥವಾ ಸಿಆರ್‌ಎಸ್‌ಎಫ್ ಭದ್ರತೆ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಕೆಲಗೇರಿಯಲ್ಲಿಯ ಬಸವರಾಜ ಮುತ್ತಗಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.