ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಸ್ ಅಪಘಾತ: ೧೫ ಪ್ರಯಾಣಿಕರಿಗೆ ಗಾಯ

07:37 PM Nov 27, 2023 IST | Samyukta Karnataka

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಗೇಟ್ ಬಳಿಯು ಕಂಬಕ್ಕೆ ಡಿಕ್ಕಿಯಾಗಿದ್ದು, ೧೫ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಕಿಡದಾಳ ರಸ್ತೆಯ ರೈಲ್ವೆ ಗೇಟ್ ಬಳಿ ಸೋಮವಾರ ಸಂಭವಿಸಿದೆ.
ಗಂಗಾವತಿಯಿಂದ ಕೊಪ್ಪಳ ನಗರಕ್ಕೆ ಆಗಮಿಸುತ್ತಿರುವಾಗ ಘಟನೆ ಸಂಭವಿಸಿದೆ. ಬಸ್ ವಾಪಸ್ ಹಿಮ್ಮುಖವಾಗಿ ಚಲಿಸಿ ತಗ್ಗು ಪ್ರದೇಶಕ್ಕೆ ಹೋಗಿ ನಿಂತಿದೆ. ಇದರಿಂದಾಗಿ ವಾಹನ ಚಾಲಕ ಸೇರಿ ೧೫ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article