ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಾಯ್ಲರ್ ರಿಪೇರಿ ಮಾಡುತ್ತಿದ್ದ ವೇಳೆ ಏಕಾಏಕಿ ಹೊರ ಬಂದ ಭಾರೀ ಶಾಖ: ರಿಪೇರಿ ಮಾಡುತ್ತಿದ್ದ ಯುವಕ ಸಾವು

03:15 PM Jun 01, 2024 IST | Samyukta Karnataka

ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುತ್ತಿದ್ದ ವೇಳೆ ಅದರಿಂದ ಹೊರಬಂದ ಬಾರಿ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ನಗರ ಹೊರವಲಯ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ಘಟನೆ ನಡೆದಿದ್ದು ಬಾಯ್ಲರ್ ರಿಪೇರಿ ಮಾಡುತ್ತಿದ್ದ ಮಡಿಕೇರಿ ಕುಶಾಲನಗರದ ಯುವಕ ಉದಯ್ (27) ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಶಾಖದ ತೀವ್ರತೆಗೆ ಯುವಕನ ದೇಹ ಸುಟ್ಟು ಕರಕಲಾಗಿದೆ.
ನಗರದ ಜಿಲ್ಲಾಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು ಮರಣೋತ್ತರ ಪರೀಕ್ಷೆ ಒಳಪಡಿಸಲಾಗಿದೆ.
ಬಾಯ್ಲರ್ ಸರಿಪಡಿಸುವಾಗ ಏಕಾಏಕಿ ಹೊರ ಬಂದ 340 ಡಿಗ್ರಿ ಶಾಖ ಹೊರಬಂದ ಪರಿಣಾಮ ಘಟನೆ ನಡೆದಿದೆ. ಮಗನನ್ನು ಕಳೆದುಕೊಂಡ ತಾಯಿ ಶವಗಾರದ ಬಳಿ ಕಣ್ಣೀರು ಹಾಕುವ ದೃಶ್ಯ ಮನಕಲಕುವಂತಿತ್ತು.

Next Article