For the best experience, open
https://m.samyuktakarnataka.in
on your mobile browser.

ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಶೆಟ್ಟರ

01:12 PM Feb 03, 2024 IST | Samyukta Karnataka
ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಶೆಟ್ಟರ

ಹುಬ್ಬಳ್ಳಿ: ಹೆಬಸೂರು ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಗೈರಾಗುವ ಮೂಲಕ ಮಾಜಿ ಮುಖ್ಯಮಂತ್ರಿ‌ ಜಗದೀಶ ಶೆಟ್ಟರ ಅಂತರ ಕಾಯ್ದುಕೊಂಡಿದ್ದಾರೆ.
ಜಗದೀಶ ಶೆಟ್ಟರ ಇತ್ತೀಚೆಗೆ ಬಿಜೆಪಿ ಪಕ್ಷ ಸೇರಿದ್ದರೂ ಸ್ಥಳೀಯ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಶೆಟ್ಟರ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಕೂಡ ಗೈರಾಗಿದ್ದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಸೇರಿದಂತೆ ಜೋಶಿ ಬಣ ಸಭೆಗೆ ಹಾಜರಾಗಿತ್ತು.