For the best experience, open
https://m.samyuktakarnataka.in
on your mobile browser.

ಬಿಜೆಪಿಯ ಹಿರಿಯ ಮುಖಂಡ ನಿಧನ

07:02 PM Apr 17, 2024 IST | Samyukta Karnataka
ಬಿಜೆಪಿಯ ಹಿರಿಯ ಮುಖಂಡ ನಿಧನ

ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ರಮೇಶ ಕುಮಾರ ಪಾಂಡೆ ನಿಧನ ಹೊಂದಿದ್ದಾರೆ.
ಈ ಕುರಿತಂತೆ ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ ಮಾಜಿ ಶಾಸಕರು, ಭಾರತೀಯ ಜನತಾ ಪಕ್ಷದ ಹಿರಿಯರು, ಆರ್. ಆರ್. ಕೆ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ ಕುಮಾರ ಪಾಂಡೆ ಅವರು ನಮ್ಮನ್ನೆಲ್ಲ ಆಗಲಿರುವ ಸುದ್ದಿ ತಿಳಿದು ತೀವ್ರ ಬೇಸರವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ