ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

01:33 PM Apr 12, 2024 IST | Samyukta Karnataka

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಉಪಸ್ಥಿತರಿದ್ದರು. ಒಂದೇ ದಿನ ಎರಡನೇ ಬಾರಿಗೆ ಈಶ್ವರಪ್ಪನವರಿಂದ ಉಮೇದುವಾರಿಕೆ ಸಲ್ಲಿಕೆಯಾಗಿದೆ. ಇಂದು ಬೆಳಗ್ಗೆ ಈಶ್ವರಪ್ಪ ಅತ್ಯಾಪ್ತ ಹಾಗೂ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಅವರು ಈಶ್ವರಪ್ಪ ಪರವಾಗಿ ನಾಮಪತ್ರ ಸಲ್ಲಿಸಿದ್ದರು. ಇದಕ್ಕೂ ಮುನ್ನ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ನಗರದ ಮಾರಿಕಾಂಬ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು.

Next Article