ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಸೇರಿದ್ದಕ್ಕೆ ಪಶ್ಚಾತ್ತಾಪ ಪಡಲಿರುವ ಶೆಟ್ಟರ್

10:00 AM Mar 06, 2024 IST | Samyukta Karnataka

ಹುಬ್ಬಳ್ಳಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ ಎಂದರು. ಇನ್ನು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಾ.7ರಂದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಮಹದಾಯಿ ಕಾಮಗಾರಿ ಅನುಷ್ಠಾನಗೊಳಿಸಲು ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೇಂದ್ರದಿಂದ ನಿರಾಕ್ಷೇಪಣಾ ಪತ್ರ ಕೊಡಿಸಲಿ ಎಂದರು.
ಸಚಿವ ಸಂತೋಷ ಲಾಡ್, ಪ್ರಿಯಾಂಕ ಖರ್ಗೆ ಜೊತೆಗಿದ್ದರು.

ಮುಂದಿನ ಸಿ.ಎಂ ಘೋಷಣೆ ಕೂಗಿದ ಕಾರ್ಯಕರ್ತರು: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಡಿ.ಕೆ. ಶಿವಕುಮಾರ್ ಬಂದಿಳಿಯುತ್ತಿದ್ದಂತೆ, 'ಮುಂದನ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೈ' ಎಂದು ಕೂಗಿದರು.

Next Article