For the best experience, open
https://m.samyuktakarnataka.in
on your mobile browser.

ಬಿಲ್ಕಿಸ್ ಬಾನೋ ಪ್ರಕರಣ: ಸರಕಾರದ ಆದೇಶ ರದ್ದು ಮಾಡಿದ ಸುಪ್ರೀಂ ಕೋರ್ಟ್

04:48 PM Jan 08, 2024 IST | Samyukta Karnataka
ಬಿಲ್ಕಿಸ್ ಬಾನೋ ಪ್ರಕರಣ  ಸರಕಾರದ ಆದೇಶ ರದ್ದು ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಜೈಲಿನಲ್ಲಿಯೇ ಮುಂದುವರಿಯಬೇಕು ಎಂದು ಹೇಳಿದೆ.

ಗುಜುರಾತ್ ಗಲಭೆಯ ಸಮಯದಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಅಪರಾಧಿಗಳು ಹತ್ಯೆ ಮಾಡಿದ್ದರು. ಪ್ರಕರಣದ ಆರೋಪಿಗಳನ್ನು ಜೀವಾವಧಿ ಶಿಕ್ಷೆಯ ಅವಧಿಗೂ ಮುನ್ನವೇ ರಾಜ್ಯ ಸರ್ಕಾರವು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಿತ್ತು.