ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಹಾರ್‌ನಲ್ಲಿದ್ದ ಅಪವಿತ್ರ ಮೈತ್ರಿ ಅಂತ್ಯ

08:04 PM Jan 28, 2024 IST | Samyukta Karnataka

ಹುಬ್ಬಳ್ಳಿ: ನಿತೀಶ್‌ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಹಾರ್‌ದಲ್ಲಿದ್ದ ಅಪವಿತ್ರ ಮೈತ್ರಿ ಸರ್ಕಾರ ಅಂತ್ಯವಾಗಿದೆ. ಮುಂದೇನಾಗುತ್ತೋ ನೋಡೋಣ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಯಾವತ್ತೂ ತೊಂದರೆ ಕೊಟ್ಟಿಲ್ಲ. ವೈಯಕ್ತಿಕವಾಗಿಯೂ ಅವರ ಬಗ್ಗೆ ನಾವ್ಯಾರೂ ಟೀಕೆ ಮಾಡಿಲ್ಲ. ಆದರೆ ಭ್ರಷ್ಟಾಚಾರ ಪರಿವಾರವಾದಿಗಳ ಬಗ್ಗೆ ಟೀಕೆ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದ ಜೋಶಿ, ಲಾಲೂಪ್ರಸಾದ್ ಯಾದವ್, ಬೆಂಬಲಿಗರು, ಪರಿವಾರದವರು ತೊಂದರೆ ಕೊಟ್ಟಿರಬಹುದೇನೋ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಹಿಂದೂ ವಿರೋಧಿ. ಮುಸಲ್ಮಾನರ ತುಷ್ಟೀಕರಣ ಮಾಡಿಕೊಂಡು ಬಂದಿರುವ ವ್ಯಕ್ತಿ. ಅವರ ಸರ್ಕಾರದ ನಡೆಯೂ ಅದೇ ಹಾದಿಯಲ್ಲಿ ಸಾಗಿದೆ. ಕೆರಗೋಡಿನಲ್ಲಿ ಹನುಮಧ್ವಜ ತೆರವು ಪ್ರಕರಣ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಒಂದಂತೂ ಸತ್ಯ ಈ ಸರ್ಕಾರದಲ್ಲಿ ಇಂಥದ್ದೆಲ್ಲ ನಡೆಯುತ್ತಿದೆ ಎಂದರು.

Next Article