ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಹಾರ್ ಆದ ಕರ್ನಾಟಕ, ಪೊಲೀಸ್ ಸ್ಟೇಶನ್ ಗಳಲ್ಲಿ ಗೂಂಡಾಗಳಿಗೆ ರಾಜಮರ್ಯಾದೆ

10:49 AM Apr 19, 2024 IST | Samyukta Karnataka

ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ.ಕರ್ನಾಟಕ ಕರ್ನಾಟಕವಾಗಿ ಉಳಿದಿಲ್ಲ. ಬಿಹಾರ್ ಆಗಿದೆ. ಮುಖ್ಯಮಂತ್ರಿಯಾದಿಯಾಗಿ ಯಾರಿಗೂ ಜವಾಬ್ದಾರಿ ಇಲ್ಲ. ಟ್ವೀಟ್ ಮಾಡಿ ಬಿಟ್ಟರೆ ಅವರ ಕೆಲಸ ಮುಗೀತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಸಂಜೆ ಹತ್ಯೆಗೀಡಾದ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿ ಶವಾಗಾರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಊರು ಬಿಟ್ಟಿದ ರೌಡಿಗಳು, ಗೂಂಡಾಗಳು ಮತ್ತೆ ಊರು ಸೇರಿದ್ದಾರೆ. ಮಟಕಾ ಆಡಿಸ್ತಾರೆ. ರೌಡಿಸಂ ಮಾಡ್ತಾರೆ, ಬೆದರಿಕೆ ಹಾಕ್ತಾರೆ. ಕೊಲೆ ಸುಲಿಗೆ ನಡೆಯುತ್ತಿವೆ ಎಂದು ಬೊಮ್ಮಾಯಿ ಆರೋಪಿಸಿದರು.
ಮೊನ್ನೆ ಬೆಂಗಳೂರಿನಲ್ಲಿ, ನಿನ್ನೆ ಹುಬ್ಬಳ್ಳಿಯಲ್ಲಿ ಈ ವಿದ್ಯಾರ್ಥಿನಿ, ರಾತ್ರಿ ಗದುಗಿನಲ್ಲಿ ನಾಲ್ವರ ಹತ್ಯೆ ಆಗಿದೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ? ಎಂದು ಪ್ರಶ್ನಿಸಿದರು.
ಕಾನೂನು ಸುವ್ಯವಸ್ಥೆ ಸರಿಯಾಗಬೇಕು. ಅದು ಸರ್ಕಾರದ ಕೆಲಸ ಎಂದು ಹೇಳಿದರು.

Next Article