For the best experience, open
https://m.samyuktakarnataka.in
on your mobile browser.

ಬೆಂಗಳೂರಿನ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ: ಐವರಿಗೆ ಗಂಭೀರ ಗಾಯ

03:02 PM Mar 01, 2024 IST | Samyukta Karnataka
ಬೆಂಗಳೂರಿನ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ  ಐವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನ ಹೊಟೆಲ್‌ ಒಂದರಲ್ಲಿ ನಿಗೂಢ ವಸ್ತು ಸ್ಫೋಟಗೊಂಡು ಮೂವರು ಸಿಬ್ಬಂದಿ ಸೇರಿ ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ವೈಟ್‌ಫೀಲ್ಡ್ ಸಮೀಪದ ಕುಂದಲಹಳ್ಳಿ ಗೇಟ್ ಬಳಿಯ ಬಸ್‌ ನಿಲ್ದಾಣದ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಹೋಟೆಲ್ ಒಳಗೆ ಭೀಕರ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದಂತೆ ಎಚ್‌ಎಎಲ್‌ ಪೊಲೀಸರು ಸ್ಥಳಕ್ಕೆ ಭೇಟಿಯ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಕೆಫೆಗೆ ಬಂದಿದ್ದ ವ್ಯಕ್ತಿಯ ಬ್ಯಾಗ್‌ನಲ್ಲಿ ಸ್ಫೋಟಕ ಇತ್ತು ಎಂಬ ಶಂಕೆ ಇದ್ದು, ಸಿಲಿಂಡರ್‌ ಅಥವಾ ಬಾಯ್ಲರ್‌ ಸ್ಫೋಟ ಕೂಡ ಆಗಿರಬಹುದೆಂದು ಕೂಡ ಅಂದಾಜಿಸಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.