ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಬಹುತೇಕ ನಿಶ್ಚಿತ

12:30 PM Mar 15, 2024 IST | Samyukta Karnataka

ಬೆಳಗಾವಿ: ಬೆಳಗಾವಿ ಕ್ಷೇತ್ರದಿಂದ ಜಗದೀಶ್​ ಶೆಟ್ಟರ್​ ಅವರಿಗೆ ಬಿಜೆಪಿ ಟಿಕೆಟ್​ ಕೊಟ್ಟರೆ ಅವರ ಜತೆ ಪ್ರಚಾರ ಮಾಡುತ್ತೇನೆ ಎಂದು ಮಂಗಳಾ ಅಂಗಡಿ ಹೇಳಿದ್ದಾರೆ.
ದೆಹಲಿಯಿಂದ ವಾಪಸಾದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಅವರ ಹೆಸರು ಬಹುತೇಕ ಅಂತಿಮವಾಗಿದೆ. ಅವರೂ ಸಹ ಸಮ್ಮತಿಸಿದ್ದಾರೆ. ಇದರಿಂದ ನಮಗೇನು ಬೇಸರವಿಲ್ಲ ಎಂದಿದ್ದಾರೆ.
ದೆಹಲಿ ಭೇಟಿ: ಎರಡನೇ ಪಟ್ಟಿಯಲ್ಲಿ ನಮ್ಮ ಹೆಸರು ಇಲ್ಲ ಎಂದು ಗೊತ್ತಾಗಿ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದೆ. ಆದರೆ ಜಗದೀಶ್ ಶೆಟ್ಟರ್ ಹೆಸರು ಫೈನಲಾಗಿದೆ ಎಂದು ಅಲ್ಲಿ ತಿಳಿದು ಬಂತು, ಹೀಗಾಗಿ ಯಾವುದೇ ನಾಯಕರನ್ನು ಭೇಟಿಯಾಗದೆ ವಾಪಸ್ ಬಂದೆ. ನಾಯಕರ ನಿರ್ಧಾರವನ್ನು ನಾವು ಒಪ್ಪಿಕೊಳ್ಳಲೇ ಬೇಕಾಗುತ್ತದೆ, ಜಗದೀಶ್ ಶೆಟ್ಟರ್ ಸಹ ನಮ್ಮ ಮನೆಯವರೇ. ಅವರ ಪರವಾಗಿ ಮುಕ್ತ ಮನಸ್ಸಿನಿಂದ ಪ್ರಚಾರ ಮಾಡುತ್ತೇವೆ.

ಅಂಗಡಿ ಕುಟುಂಬಕ್ಕೆ ಟಿಕೆಟ್‌: ನಮ್ಮ ಕುಟುಂಬದಲ್ಲಿ ನನಗೆ ಅಥವಾ ನಮ್ಮ ಮಕ್ಕಳಾದ ಶ್ರದ್ಧಾ ಇಲ್ಲವೇ ಸ್ಪೂರ್ತಿ ಅವರಿಗೆ ಟಿಕೆಟ್ ಸಿಗಬೇಕು ಎಂಬ ಆಸೆಯಿತ್ತು. ಈಗಲೂ ಹೈಕಮಾಂಡ್ ಪಟ್ಟಿಯಲ್ಲಿ ನಮ್ಮ ಹೆಸರುಗಳಿವೆ. ಇದರಿಂದ ಇನ್ನೂ ಆಸೆ ಕಳೆದುಕೊಂಡಿಲ್ಲ

ಶೆಟ್ಟರ್ ವಿರುದ್ಧ ಗೋ ಬ್ಯಾಕ್ ಅಭಿಯಾನ: ಟಿಕೆಟ್ ಮಿಸ್ ಆದಾಗ ಆರಂಭದಲ್ಲಿ ಈ ರೀತಿ ಆಗುವುದು ಸಹಜ. ಈಗಾಗಲೇ ಕಾರ್ಯಕರ್ತರು, ಶಾಸಕರ ಜತೆಗೆ ಶೆಟ್ಟರ್ ಅವರು ಮಾತಾಡಿದ್ದಾರೆ ಎಂದರು.

Next Article