For the best experience, open
https://m.samyuktakarnataka.in
on your mobile browser.

ಬೋನಿಗೆ ಬಿದ್ದ ಮತ್ತೊಂದು ಚಿರತೆ

12:43 PM Sep 22, 2024 IST | Samyukta Karnataka
ಬೋನಿಗೆ ಬಿದ್ದ ಮತ್ತೊಂದು ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.
ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿ ಕಂಡು ಬಂದಿದ್ದು ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಆಳವಡಿಸಿದ್ದರು. ಸುಮಾರು 3 ತಿಂಗಳ ನಂತರ ಚಿರತೆ ಈ ಬೋನಿನೊಳಗೆ ಸರೆಯಾಗಿತ್ತು. ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿತ್ತು. ಅದರೆ ಒಂದೇ ವಾರದೊಳಗೆ ಮತ್ತೊಂದು ಈ ಪರಿಸರದಲ್ಲಿ ಸುತ್ತಾಡಿದ್ದಲ್ಲದೇ ಮನೆಯ ಕೋಳಿಯನ್ನು ಹಿಡಿದಿತ್ತು. ಇದರಿಂದ ಮತ್ತಷ್ಟು ಆತಂಕಕ್ಕೊಳಗಾದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಚಿರತೆ ಸೆರೆ ಹಿಡಿಯುವಂತೆ ಮನವಿ‌ ಮಾಡಿಕೊಂಡಿದ್ದರು. ಅದರಂತೆ ಮತ್ತೆ ಬೋನ್ ಅಳವಡಿಸಲಾಗಿತ್ತು. ಕಳೆದ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಬೋನಿನೊಳಗೆ ಚಿರತೆ ಸೆರೆಯಾಗಿದೆ.