ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ

02:02 PM Dec 24, 2023 IST | Samyukta Karnataka

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ ಆ ನಂತರ ಹಿಜಾಬ್ ಇರಬೇಕು ಅನ್ನೋದು ನನ್ನ ಕಲ್ಪನೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯವರು ಸಮಾನತೆ ವಿಚಾರ ಮಾತಾಡ್ತಾರೆ. ಆಹಾರ, ಉಡುಪಿನ ಹಕ್ಕು ಎಲ್ಲರ ವೈಯಕ್ತಿಕ. ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಈ ವಿಚಾರ ಮಾತಾಡ್ತಿದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡ್ತೀವಿ. ನಮ್ಮು ಜಾತ್ಯಾತೀತ ರಾಷ್ಟ್ರ, ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.
ಕಾಂಗ್ರೆಸ್ ತುಷ್ಟಿಕರಣ ಮಾಡುತ್ತಿಲ್ಲ. ಬಹುಸಂಖ್ಯಾತರ ತುಷ್ಟಿಕರಣ ಮಾಡ್ತಿರೋದು ಬಿಜೆಪಿ, ಹಿಂಸೆ ಸುಳ್ಳನ್ನು ಪ್ರಚಾರ ಮಾಡ್ತಿರೋದು ಬಿಜೆಪಿ. ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ಇವರು ವಿರೋಧ. ನಾಗಪುರದಲ್ಲಿ ಇರೋ ಇವರ ಸೂತ್ರಧಾರರು ಜಾತಿ ಗಣತಿ ವಿರೋಧಿಗಳು ಎಂದು ಪರೋಕ್ಷವಾಗಿ ಆರ್‌ಎಸ್‌ಎಸ್ ನಾಯಕರ ವಿರುದ್ಧ ಹರಿಪ್ರಸಾದ್ ಹರಿಹಾಯ್ದರು.
ಇವರಿಂದ ನಾವು ಕಲಿಯಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ವ್ಯಂಗ್ಯವಾಡಿದರು.

Next Article