For the best experience, open
https://m.samyuktakarnataka.in
on your mobile browser.

ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ

04:17 PM Sep 29, 2024 IST | Samyukta Karnataka
ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ

ಶ್ರೀನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡುವಾಗಲೇ ದಿಢೀರ್ ಅಸ್ವಸ್ಥರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದಿದೆ.
ಚುನಾವಣಾ ಪ್ರಚಾರದ ಭಾಷಣದ ವೇಳೆ ಅವರ ಧ್ವನಿಯು ತೀವ್ರವಾಗಿ ಕಟ್ಟಿಕೊಂಡಿದ್ದು, ಈ ವೇಳೆ ಅವರು ಮಾತನಾಡಲು ಆಗದಷ್ಟು ಆಯಾಸ ಅನುಭವಿಸಿದರು. ಕೂಡಲೇ ವೇದಿಕೆ ಮೇಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಖರ್ಗೆ ಅವರ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಬಂದಿದ್ದು, ಕುಡಿಯಲು ನೀರು ಕೊಟ್ಟರು. ಬಳಿಕ ಖರ್ಗೆ ಅವರ ಕೈ ಹಿಡಿದು ಕೂರಿಸಿದ್ದಾರೆ.

Tags :