For the best experience, open
https://m.samyuktakarnataka.in
on your mobile browser.

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ: ಹಾಡಹಗಲೇ ರೌಡಿಶೀಟರ್ ಹತ್ಯೆ

03:46 PM Jun 16, 2024 IST | Samyukta Karnataka
ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ  ಹಾಡಹಗಲೇ ರೌಡಿಶೀಟರ್ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ಚಡಚಣ ತಾಲೂಕಿನ ನೀವರಗಿ ರಸ್ತೆಯಲ್ಲಿ ಅಶೋಕ ಮಲ್ಲಪ್ಪ ಗಂಟಗಲ್ಲಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಮೃತ ಅಶೋಕ ರೌಡಿ ಶೀಟರ್ ಆಗಿದ್ದು, ಇತ್ತೀಚಿಗಸ್ಟೇ ಜೈಲಿನಿಂದ ಬೆಲ್ ಮೇಲೆ ಹೊರಬಂದಿದ್ದ, ರವಿವಾರ ಆತ ಮನೆಯಿಂದ ಚಡಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ದಾಳಿ ಮಾಡಿದ ಹಂತಕರು ಅಶೋಕ‌ನ ಬೆನ್ನಿಗೆ ಮೂರಕ್ಕೂ ಹೆಚ್ಚು ಗುಂಡಿಗಳನ್ನು ಹೊಡೆದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಅಶೋಕ ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ, ಹಳೆ ದ್ವೇಷದ ಹಿನ್ನಲೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯ ನಂತರವೇ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಸ್ಥಳಕ್ಕೆ ಚಡಚಣ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.