For the best experience, open
https://m.samyuktakarnataka.in
on your mobile browser.

ಮಚ್ಚಿನಿಂದ ಕೊಚ್ಚಿ ಉದ್ಯಮಿ ಕೊಲೆ, ಪತ್ನಿಯೂ ಗಂಭೀರ

01:52 PM Sep 22, 2024 IST | Samyukta Karnataka
ಮಚ್ಚಿನಿಂದ ಕೊಚ್ಚಿ ಉದ್ಯಮಿ ಕೊಲೆ  ಪತ್ನಿಯೂ ಗಂಭೀರ

ಕಾರವಾರ: ಜಾತ್ರೆಗೆ ಆಗಮಿಸಿದ್ದ ಉದ್ಯಮಿ ಹಾಗೂ ಅವರ ಪತ್ನಿ ಮೇಲೆ ಐವರು ಅಪರಿಚಿತರು ಬೆಳ್ಳಂಬೆಳಿಗ್ಗೆ ತಲ್ವಾರ್ ಹಾಗೂ ಇತರೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಹಣಕೋಣದಲ್ಲಿ ಭಾನುವಾರ ಬೆಳಕಿಗೆ ಬಂದಿದೆ.
ಪೂನಾದಲ್ಲಿ ಉದ್ಯಮಿಯಾಗಿರುವ ಹಣಕೋಣದ ವಿನಾಯಕ ಹತ್ಯೆಗೀಡಾದ ವ್ಯಕ್ತಿ. ಆತನ ಪತ್ನಿ ಗಂಭೀರ ಹಲ್ಲೆಗೊಳಗಾಗಿದ್ದು ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಊರಿನ ಸಾತೇರಿ ಜಾತ್ರೆಗೆ ಬಂದ ಇವರು ಭಾನುವಾರ ಬೆಳಗ್ಗೆ ಮರಳಿ ಹೊರಡಲು ಸಿದ್ಧರಾಗಿದ್ದರು. ಈ ವೇಳೆ ಬೆಳಗಿನ ಜಾವ 5.30ರ ಸುಮಾರಿಗೆ ಐದು‌ ಜನ ಅಪರಿಚಿತರು ಮನಗೆ ನುಗ್ಗಿದ್ದಾರೆ. ಬಳಿಕ ಅಡುಗೆ ಮನೆಯಲ್ಲಿದ್ದ ವಿನಾಯಕನನ್ನು ಮನ ಬಂದಂತೆ ಚಾಕು ಹಾಗೂ ತಲ್ವಾರ್ ನಿಂದ ಕಡಿದು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಆತನ‌ ಹೆಂಡತಿ‌ ಕೂಡ ಇದ್ದು ಅವರ ಮೇಲು ಹಲ್ಲೆ ಮಾಡಿದ್ದು ತಲೆ, ಕೈ ಸೇರಿದಂತೆ ಹಲವೆಡೆ ಗಂಭೀರ ಗಾಯವಾಗಿದೆ.
ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮನೆಯಂಗಳದಲ್ಲಿ ಚಾಕು ಹಾಗೂ ರಾಡ್ ಬಿದ್ದಿದೆ ಎನ್ನಲಾಗಿದ್ದು ತನಿಖೆಯ ಬಳಿಕವೇ ನಿಜಾಂಶ ಹೊರಬರಬೇಕಿದೆ. ಸದ್ಯ ವಿನಾಯಕ‌ ಅವರ ಪತ್ನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Tags :