For the best experience, open
https://m.samyuktakarnataka.in
on your mobile browser.

ಮತ್ತೆ ಶರಣರ ಬಂಧನ

03:28 PM Nov 20, 2023 IST | Samyukta Karnataka
ಮತ್ತೆ ಶರಣರ ಬಂಧನ

ದಾವಣಗೆರೆ: ಎರಡನೇ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಯಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ದ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ದಾವಣಗೆರೆ ಬಸವನಗರ ಪೊಲೀಸ್ ಠಾಣೆಯ ಪೊಲೀಸರ ಸಹಕಾರದೊಂದಿಗೆ ನಗರದ ವಿರಕ್ತಮಠದಲ್ಲಿದ್ದ ಮುರುಘಾ ಶರಣರನ್ನು ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮುರುಘಾ ಶರಣರು ಮೌನವಾಗಿ ಪೊಲೀಸರ ಜೀಪಿನಲ್ಲಿ ಕುಳಿತ್ತಿದ್ದರು. ವಿರಕ್ತಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.