ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಅಪ್ರಾಪ್ತರ ಸಾವು

08:38 PM May 19, 2023 IST | Samyukta Karnataka

ಗದಗ: ಜಿಲ್ಲೆಯ ರೋಣ, ಅಬ್ಬಿಗೇರಿ ಗ್ರಾಮಗಳ ಮಧ್ಯೆ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರಿ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಇನ್ನೋರ್ವ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಮೃತಪಟ್ಟ ಅಪ್ರಾಪ್ತ ಬಾಲಕರನ್ನು ಅನೂಪ ಇಟಗಿ(15), ಶ್ರೀಶಾಂತ ಗಡಗಿ(15) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ಬಾಲಕ ಮೌನೇಶನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರೂ ಬಾಲಕರು ಬೈಕ್ ಮೇಲೆ ಅಬ್ಬಿಗೇರಿ ಗ್ರಾಮದ ಹೊರವಲಯದಲ್ಲಿರುವ ಕಲಾಕಾಶಿ ಬಳಿಯಲ್ಲಿ ಈಜಲು ಹೋಗಿ ವಾಪಸ್ಸು ಬರುವಾಗ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಅಪ್ರಾಪ್ತ ಬಾಲಕರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಬಿದ್ದಿವೆ. ಅಪಘಾತದ ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Next Article