ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಳೆಗೆ ಮಾಯವಾದ ಬಾವಿ

03:48 PM Jul 24, 2023 IST | Samyukta Karnataka

ಶಿರಸಿ: ತಾಲೂಕಿನಲ್ಲಿ ಕಳೆದ 4-6 ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಅವಾಂತರಗಳು ಉಂಟಾಗುತ್ತಿದ್ದು, ಖಾಸಗಿ ಹಾಗೂ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗುತ್ತಿದೆ.
ಸುಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಗುಂಡಿಕೊಪ್ಪ ಗ್ರಾಮದಲ್ಲಿ ವಿಪರೀತ ಮಳೆಗೆ ಸಾರ್ವಜನಿಕ ಬಾವಿ ಕುಸಿದು ಹೋಗಿದೆ.
ಬಾವಿಯ ಕಟ್ಟೆ ಸಹಿತ ಭೂಮಿಯೊಳಗೆ ಸೇರಿ ಹೋಗಿದ್ದು, ಬೃಹದಾಕಾರದ ಗುಂಡಿ ಮಾತ್ರ ಕಾಣುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮಕೈಗೊಂಡಿದ್ದಾರೆ.

Next Article