For the best experience, open
https://m.samyuktakarnataka.in
on your mobile browser.

ಮಾಜಿ ಡಿಸಿಎಂ ಪರಮೇಶ್ವರ ತಲೆಗೆ ಕಲ್ಲೇಟು

06:21 PM Apr 28, 2023 IST | Samyukta Karnataka
ಮಾಜಿ ಡಿಸಿಎಂ ಪರಮೇಶ್ವರ ತಲೆಗೆ ಕಲ್ಲೇಟು

ಚುನಾವಣಾ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಲೆಗೆ ಕಲ್ಲೇಟು ಬಿದ್ದು ಗಾಯವಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.
ಬೈರೇನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕಾರ್ಯಕರ್ತರು ಅವರನ್ನು ಹೊತ್ತು ಕುಣಿಯುತ್ತಿದ್ದರು. ಆಗ ಹೂವು ಹಾಕುವ ವೇಳೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಕಲ್ಲು ಬಿದ್ದು ತಲೆಗೆ ಪೆಟ್ಟಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಆದರೆ, ಕಲ್ಲು ಎಸೆದ ದುಷ್ಕರ್ಮಿಗಳು ಯಾರು ಎಂದು ತನಿಖೆಯಿಂದ ತಿಳಿದು ಬರಬೇಕಿದೆ.
ಈ ಹಿಂದೆ ಪರಮೇಶ್ವರ ಅವರು ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ಎಸೆದ ಘಟನೆ ಜರುಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಪೊಲೀಸ್‌ ಪೇದೆಯೊಬ್ಬರಿಗೆ ಕಲ್ಲು ತಾಗಿ ಗಾಯಗೊಂಡಿದ್ದರು.