ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಜಿ ಸಿಎಂ ಮನೋಹರ್ ಜೋಶಿ ನಿಧನ

11:41 AM Feb 23, 2024 IST | Samyukta Karnataka

ಮುಂಬೈ: ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ಮುಂಬೈನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
2 ದಿನಗಳ ಹಿಂದಷ್ಟೇ ಅವರಿಗೆ ಹೃದಯಸ್ತಂಭನ ಆಗಿದ್ದರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿೀಡಲಾಗುತ್ತಿತ್ತು. ಮುಂಬೈನ ಶಿವಾಜಿ ಪಾರ್ಕ್ ರುದ್ರಭೂಮಿಯಲ್ಲಿ ಶುಕ್ರವಾರವೇ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಮನೋಹರ್ ಜೋಶಿ ಅವರು ರಾಯಗಡ ಜಿಲ್ಲೆಯ ನಂಡ್ವಿ ಗ್ರಾಮದಲ್ಲಿ 1937ರ ಡಿಸೆಂಬರ್​​ 2 ರಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಎಂಎ ಮತ್ತು ಎಲ್​ಎಲ್​ಬಿ ಪದವಿಗಳನ್ನು ಮುಂಬೈ ವಿಶ್ವವಿದ್ಯಾಲಯದಿಂದ ಪಡೆದರು. ಜೋಶಿ ಅವರು 1995ರಿಂದ 1999ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವಿಭಜಿತ ಶಿವಸೇನಾದಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಸೇವೆ ಸಲ್ಲಿದ್ದ ಇವರು ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಿಂದ 2004ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿದ್ದರು .

Next Article