For the best experience, open
https://m.samyuktakarnataka.in
on your mobile browser.

ಮಿಲಿಟರಿ ಬರುವ ಕಾಲನೂ ಬರುತ್ತೆ

03:13 PM Jul 21, 2024 IST | Samyukta Karnataka
ಮಿಲಿಟರಿ ಬರುವ ಕಾಲನೂ ಬರುತ್ತೆ

ಹಾಸನ: ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ಗೆ ಹೆಚ್.​ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿಗೆ ಭೇಟಿ ನೀಡಿದ್ದರು. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿ ಅವರು ಯಾಕೆ ಇಲ್ಲಿಗೆ ಬರುತ್ತಾರೆ. ಏನು ಮಿಲಿಟರಿ ಕರಕೊಂಡು ಬಂದಿದ್ದಾರೆ? ಎಂದು ಕಿಡಿಕಾರಿದ್ದರು.