For the best experience, open
https://m.samyuktakarnataka.in
on your mobile browser.

ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿಯಲ್ಲ, ಬದಲಾವಣೆಯೇ ಬೆಳಕು…

11:18 AM Oct 08, 2024 IST | Samyukta Karnataka
ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿಯಲ್ಲ  ಬದಲಾವಣೆಯೇ ಬೆಳಕು…

ಬೆಂಗಳೂರು: ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ವ್ಯಾಖ್ಯಾನಿಸುವುದಿಲ್ಲ. ಬದಲಾವಣೆಯೇ ಬೆಳಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.
ದೇಶದಲ್ಲಿ ಎನ್‌ಡಿಯಗೆ 12 ವರ್ಷ ಜನರು ಅವಕಾಶ ನೀಡಿದ್ದಾರೆ. ಆದರೆ ಇದೀಗ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ, ಬದಲಾವಣೆಯೇ ಬೆಳಕು ಮೂಡಿದೆ, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ. ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ , ಜನರ ಭಾವನೆಯೇ ಈ ಫಲಿತಾಂಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಮೈತ್ರಿಕೂಟದ ಮುನ್ನಡೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಜನರೇ ಬದಲಾವಣೆಯನ್ನು ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಅಂತ ಬದುಕಿಗಾಗಿ‌ ಕಾರ್ಯಕ್ರಮ ಕೊಟ್ಟಿದ್ದೇವೆ ಎಂದರು.ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಫಲಿತಾಂಶ ಜನರ ಭಾವನೆಯೇ ಆಗಿದೆ. ಆದರೆ ಈ ಫಲಿತಾಂಶವನ್ನು ನಾನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ವ್ಯಾಖ್ಯಾನಿಸುವುದಿಲ್ಲ. ಬದಲಾವಣೆಯೇ ಬೆಳಕಾಗಿದೆ ಎಂದರು.

Tags :