ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಡಾ ಪ್ರಕರಣ: ನಿವೇಶನ ಪಡೆದವರ ಮಾಹಿತಿ ಬಹಿರಂಗಕ್ಕೆ ಆಗ್ರಹ

01:40 PM Jul 05, 2024 IST | Samyukta Karnataka

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಪಡೆದವರ ಮಾಹಿತಿ ಬಹಿರಂಗಪಡಿಸಲು ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಡವರಿಗಾಗಿ ಮೀಸಲಿಟ್ಟಿದ್ದ ನಿವೇಶನಗಳನ್ನು ಮುಖ್ಯಮಂತ್ರಿ ಸೇರಿ, ರಾಜಕಾರಣಿಗಳು , ಐಎಎಸ್ ಅಧಿಕಾರಿಗಳು ಹರಿದು ಹಂಚಿ ತಿಂದಿದ್ದರೆ.
ಮೈಸೂರು ಜಿಲ್ಲೆಯಲ್ಲಿ "ಈ ಪ್ರಭಾವಿತರೇ" ಜಾಗವನ್ನು ಸರ್ಕಾರದ ಮೂಲಕ ಅಧಿಸೂಚನೆ ಮಾಡಿಸಿ, ಮೈಸೂರು ನಗರದ ಪ್ರತಿಷ್ಠಿತ ಕಾಲೋನಿಗಳಲ್ಲಿ ಜಾಗವನ್ನು ಲೂಟಿ ಮಾಡಿದ್ದಾರೆ. ಕೆಲವರು ನೂರಾರು ನಿವೇಶನಗಳನ್ನು ತೆಗೆದುಕೊಂಡಿದ್ದಾರೆ. ನಿವೇಶನ ಪಡೆದವರೆಲ್ಲರ ಮಾಹಿತಿಯನ್ನು ಸರ್ಕಾರ ಬಹಿರಂಗಪಡಿಸಲು ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ

Next Article