ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುನಿರತ್ನಗೆ ನಾವೇನೂ ನಿಂದಿಸುವಂತೆ ಹೇಳಿಲ್ಲ

07:14 PM Sep 15, 2024 IST | Samyukta Karnataka

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೈಯ್ಯುವಂತೆ, ಸಿಕ್ಕ ಸಿಕ್ಕ ಹಾಗೆ, ಬಾಯಿಗೆ ಬಂದಂತೆ ಮಾತಾಡುವಂತೆ ನಾವೇನು ಹೇಳಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುನಿರತ್ನ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ನಾವೇನೂ ಅವರಿಗೆ ಬೈಯ್ಯುವಂತೆ ಹೇಳಿಲ್ಲವಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.
ಶಾಸಕ ಮುನಿರತ್ನ ಅವರಿಗೆ ಕಾಂಗ್ರೆಸ್‌ನವರು ಅಥವಾ ಬಿಜೆಪಿ, ಜೆಡಿಎಸ್‌ನವರು ಬೈಯ್ಯುವಂತೆ ಹೇಳಿದ್ದಾರಾ.? ತರಾತುರಿಯಲ್ಲಿ ಅವರನ್ನು ಬಂಧಿಸಿಲ್ಲ. ಅವರ ಆರೋಪಕ್ಕೆ ಏನೂ ಮಾಡಲು ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags :
bjpcongressmunirathnaSatish Jarkiholi
Next Article