ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೂಗು ಕತ್ತರಿಸಿದ ಆರೋಪಿ ಬಂಧನ

11:44 PM Jan 04, 2024 IST | Samyukta Karnataka

ಬೆಳಗಾವಿ: ಅಂಗನವಾಡಿ ಶಾಲೆ ಮಕ್ಕಳು ತಮ್ಮ ಮನೆಯ ಹೂ ಕದಿಯೋದು ಹಾಗೂ ಮನೆ ಕಡೆಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡು ಅಂಗನವಾಡಿ ಸಹಾಯಕಿಯ ಮೂಗು ಕೊಯ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣಿ ಜ್ಯೋತಿಭಾ ಮೋರೆ ಕುಡಗೋಲಿನಿಂದ ಹಲ್ಲೆ ಮಾಡಿದ ಆರೋಪಿ. ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಗಂಧಾ ಮಕ್ಕಳನ್ನು ಮೂತ್ರವಿಸರ್ಜನಗೆಂದು ಹೊರಗೆ ಬಿಟ್ಟಿದ್ದಾಳೆ. ಮಕ್ಕಳು ಆರೋಪಿ ಕಲ್ಯಾಣಿ ಮೋರೆ ಅವರ ಮನೆಯ ಕಡೆಗೆ ತೆರಳಿ ಮೂತ್ರ ವಿಸರ್ಜನೆ ಮಾಡಿದ್ದರಿಂದ ಆಕ್ರೋಶಗೊಂಡು ಕೈಯಲ್ಲಿ ಕುಡುಗೋಲು ಹಿಡಿದುಕೊಂಡು ಅಂಗನವಾಡಿಗೆ ಬಂದು ನಮ್ಮ ಮನೆಯ ಕಡೆಗೆ ಮಕ್ಕಳನ್ನು ಮೂತ್ರ ವಿಸರ್ಜನೆಗೆ ಏಕೆ ಬಿಟ್ಟಿದ್ದಿಯಾ ಎಂದು ಜಗಳ ಆರಂಭಿಸಿದ್ದಾಳೆ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದು ವಿಕೋಪಕ್ಕೆ ಹೋಗುತ್ತಿದಂತೆ ತಾಳ್ಮೆ ಕಳೆದುಕೊಂಡು ಆರೋಪಿ ಕಲ್ಯಾಣಿ ಮೋರೆ, ಕೈಯಲ್ಲಿದ್ದ ಕುಡಗೋಲಿನಿಂದ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಹಣೆಗೆ ಹಾಗೂ ಮೂಗಿಗೆ ಹೊಡೆದು ಹಲ್ಲೆ ಮಾಡಿದ್ದ, ಈಗ ಕಾಕತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Next Article