ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೂವರು ಯುವತಿಯರ ರಕ್ಷಣೆ

09:22 PM Mar 10, 2024 IST | Samyukta Karnataka

ಗೋಕರ್ಣ: ಸುಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಮೂವರು ಯುವತಿಯರನ್ನು ಜೀವರಕ್ಷ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ರವಿವಾರ ಮಧ್ಯಾಹ್ನ ಕುಡ್ಲೆ ಬೀಚ್‌ನಲ್ಲಿ ನಡೆದಿದೆ. ಬೆಂಗಳೂರು ಜಯನಗರದ ನಿವಾಸಿಗಳಾದ ಸ್ಮಿತಾ ರವಿಚಂದ್ರನ್ (೨೩), ನಿಹಾರಿಕಾ ಗಿರಿ (೨೨), ಪವಿತ್ರಾ ಸುಂದರ(೨೨) ಜೀವಾಪಾಯದಿಂದ ಪಾರಾಗಿ ಬಂದ ಯುವತಿಯರು. ಸಮುದ್ರದಲ್ಲಿ ಈಜಾಡಲು ತೆರಳಿದ ವೇಳೆ ಸುಳಿಗೆ ಸಿಲುಕಿ ಅಪಾಯದಲ್ಲಿದ್ದರು.

ಇದನ್ನು ಗಮನಿಸಿದ ಕರ್ತವ್ಯದಲ್ಲಿದ್ದ ಜೀವ ರಕ್ಷಕ ಸಿಬ್ಬಂದಿಗಳಾದ ನವೀನ ಅಂಬಿಗ, ಮಂಜುನಾಥ ಅಂಬಿಗರ ತಕ್ಷಣ ಧಾವಿಸಿ ರಕ್ಷಣೆ ಮಾಡಿದರು. ಕುಡ್ಲೆ ವಾಟರ್ ಸ್ಪೋರ್ಟ್ಸ್ ಮೈಸ್ಟಿಕ್ ಸಿಬ್ಬಂದಿಗಳು ರಕ್ಷಣಾ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ

Next Article