ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಕ್ಷಗಾನ ಯುವ ಕಲಾವಿದ ಆತ್ಮಹತ್ಯೆ

08:09 PM Jul 30, 2024 IST | Samyukta Karnataka

ಉಡುಪಿ: ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ೧೨ ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (೨೬) ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗ ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಅವರು, ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.
ಮೃತರು ತಾಯಿ, ತಮ್ಮನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Next Article