For the best experience, open
https://m.samyuktakarnataka.in
on your mobile browser.

ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಚಿಕಿತ್ಸೆ ಫಲಿಸದೆ ಯಶ್‌ ಅಭಿಮಾನಿ ಸಾವು

10:59 AM Jan 09, 2024 IST | Samyukta Karnataka
ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ  ಚಿಕಿತ್ಸೆ ಫಲಿಸದೆ ಯಶ್‌ ಅಭಿಮಾನಿ ಸಾವು

ಗದಗ: ನಟ ಯಶ್ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಮೃತಪಟ್ಟಿದ್ದರು. ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು, ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಈ ಘಟನೆ ನಡೆದಿತ್ತು. ನೆಚ್ಚಿನ ನಟ ಯಶ್​ ಅವರನ್ನು ನೋಡಲು ನಿಖಿಲ್ ಆಗಮಿಸಿದ್ದರು. ಯಶ್ ಭದ್ರತಾ ವಾಹನಕ್ಕೆ ನಿಖಿಲ್ ಸ್ಕೂಟಿ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾನೆ. ಮೃತ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.