ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯುದ್ಧಕ್ಕೆ ಮುನ್ನವೇ ಶಸ್ತ್ರತ್ಯಾಗ

11:46 AM Jan 31, 2024 IST | Samyukta Karnataka

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಯುದ್ಧಕ್ಕೆ ಮುನ್ನವೇ ಶಸ್ತ್ರತ್ಯಾಗ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶರಣಾಗುವ ಮುನ್ಸೂಚನೆ ನೀಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭೆಯಲ್ಲಿ ಸೋತರೆ ಗ್ಯಾರೆಂಟಿ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಎಚ್‌. ಸಿ. ಬಾಲಕೃಷ್ಣ ಅವರು ಕರ್ನಾಟಕ ಕಾಂಗ್ರೆಸ್‌ ಯುದ್ಧಕ್ಕೆ ಮುನ್ನವೇ ಶಸ್ತ್ರತ್ಯಾಗ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶರಣಾಗುವ ಮುನ್ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿಗಳು ಕೇವಲ ಜನರ ಮತ ಸೆಳೆಯಲು ಸೃಷ್ಟಿಸಿದ ಗಾಳಗಳೇ ಹೊರತು ಜನರ ಬದುಕು ರೂಪಿಸುವ ಶಾಶ್ವತ ಯೋಜನೆಗಳಲ್ಲ. ಭಾರತೀಯರ, ಕನ್ನಡಿಗರ ವಿಶ್ವಾಸ, ನಂಬಿಕೆ ಏನಿದ್ದರೂ ಅದು ಮೋದಿ ಗ್ಯಾರೆಂಟಿ ಮೇಲೆಯೇ ಹೊರತು ಕಾಂಗ್ರೆಸ್ ಗ್ಯಾರೆಂಟಿ ಮೇಲಲ್ಲ ಎಂದು ಬರೆದುಕೊಂಡಿದ್ದಾರೆ.

Next Article