For the best experience, open
https://m.samyuktakarnataka.in
on your mobile browser.

ಯುವಕನ ಮೇಲೆ ಆಸಿಡ್ ದಾಳಿ

08:43 PM Jan 16, 2024 IST | Samyukta Karnataka
ಯುವಕನ ಮೇಲೆ ಆಸಿಡ್ ದಾಳಿ

ಚಿತ್ರದುರ್ಗ: ಶೌಚಾಲಯಕ್ಕೆ ತೆರಳುತ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ಹಿರಿಯೂರು ನಗರದ ಬಸ್‌ ನಿಲ್ದಾಣದಲ್ಲಿ ನಡೆದಿದೆ.
ಹೊಳಲ್ಕೆರೆ ಪಟ್ಟಣದ ಅರುಣ್‌ಕುಮಾರ್(೨೯) ತಲೆ-ಕೈ, ಮುಖಕ್ಕೆ ಗಂಭೀರ ಗಾಯಗಳಾಗಿವೆ. ಹಿರಿಯೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿದು ಶೌಚಾಲಯಕ್ಕೆ ತೆರಳುವ ವೇಳೆ ಏಕಾಏಕಿ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಅರುಣ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಸಿಡ್ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.