For the best experience, open
https://m.samyuktakarnataka.in
on your mobile browser.

ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ವದಂತಿ ಹರಡದಂತೆ ಮನವಿ

01:23 PM Oct 07, 2024 IST | Samyukta Karnataka
ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು  ವದಂತಿ ಹರಡದಂತೆ ಮನವಿ

ಬೆಂಗಳೂರು: ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್‌ ಆಗುತ್ತಿದಂತೆ, ಈ ಕುರಿತು ರತನ್‌ ಟಾಟಾ ಸಾಮಾಜಿಕ ಜಾಲತಾಣದ ಅಧಿಕೃತ ಖಾತೆಯ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಇತ್ತೀಚೆಗೆ ಹರಡುತ್ತಿರುವ ವದಂತಿಗಳ ಬಗ್ಗೆ ನನಗೆ ತಿಳಿದಿದೆ, ಈ ಮಾಹಿತಿ ಆಧಾರರಹಿತವಾಗಿವೆ ಎಂದು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ನನ್ನ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿಗಳನ್ನು ಹರಡುವುದನ್ನು ತಡೆಯಬೇಕೆಂದು ವಿನಂತಿಸುತ್ತೇನೆ ಎಂದಿದ್ದಾರೆ.

Tags :