For the best experience, open
https://m.samyuktakarnataka.in
on your mobile browser.

ರಾಜಕೀಯಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ

04:18 PM Mar 03, 2024 IST | Samyukta Karnataka
ರಾಜಕೀಯಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ

ಚಾಂದಿನಿ ಚೌಕ್ ಸಂಸದ ಡಾ. ಹರ್ಷ್ ವರ್ಧನ್ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ದೆಹಲಿ ಸಂಸದ ಡಾ. ಹರ್ಷವರ್ಧನ್‌ ಅವರು ಇಂದು ರಾಜಕೀಯವನ್ನೇ ತೊರೆದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಪೋಸ್ಟ್‌ ಮಾಡಿರುವ ಅವರು ನಾನು ಕಳೆದ 30 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ಐದು ವಿಧಾನಸಭೆ ಹಾಗೂ ಎರಡು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಹಾಗೆಯೇ, ಪಕ್ಷ ವಹಿಸಿದ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆತಿದೆ. ಈಗ ನಾನು ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ನಾನು ಮತ್ತೆ ನನ್ನ ಮೂಲ ಉದ್ಯೋಗವಾದ ವೈದ್ಯ ವೃತ್ತಿಗೆ ಮರಳುತ್ತೇನೆ. ನಾನು ನಿರ್ವಹಿಸಿದ ಕೆಲಸಗಳು ತೃಪ್ತಿ ತಂದಿದೆ. ಇದುವರೆಗೆ ನನಗೆ ಅವಕಾಶ ಕೊಟ್ಟ ಬಿಜೆಪಿ ಹಿರಿಯ ನಾಯಕರು, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು, ನನಗೆ ಒಂದು ಕನಸು ಇದೆ .. ಮತ್ತು ನಿಮ್ಮ ಆಶೀರ್ವಾದ ಯಾವಾಗಲೂ ನನ್ನೊಂದಿಗೆ ಇರುತ್ತದೆ ಎಂದು ನನಗೆ ತಿಳಿದಿದೆ. ಕೃಷ್ಣನಗರದಲ್ಲಿರುವ ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ ಎಂದು ಹರ್ಷವರ್ಧನ್‌ ಅವರು ಪೋಸ್ಟ್‌ ಮಾಡಿದ್ದಾರೆ.