For the best experience, open
https://m.samyuktakarnataka.in
on your mobile browser.

ರಾಜನಾಥಸಿಂಗ್- ಎಂ.ಬಿ.ಪಾಟೀಲ್ ಮಹತ್ವದ ಮಾತುಕತೆ

01:52 PM Sep 10, 2024 IST | Samyukta Karnataka
ರಾಜನಾಥಸಿಂಗ್  ಎಂ ಬಿ ಪಾಟೀಲ್ ಮಹತ್ವದ ಮಾತುಕತೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರೊಂದಿಗೆ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದೆ. ಈ ವೇಳೆ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದೆವು.

  • # ಕರ್ನಾಟಕದಲ್ಲಿ ರಕ್ಷಣಾ ಕಾರಿಡಾರ್‌ಗಳನ್ನು ಸ್ಥಾಪಿಸುವುದು.
  • # ರಕ್ಷಣಾ ಕಂಪನಿಗಳ ದೇಶೀಯ ಉತ್ಪಾದನೆ ಮತ್ತು ರಫ್ತಿನ ಮೇಲಿನ ನಿರ್ಬಂಧಗಳ ಕುರಿತು.
  • # ರಾಜ್ಯದಲ್ಲಿ ಹೂಡಿಕೆ ಮಾಡಲು ಮತ್ತು ವ್ಯವಹಾರ ವಿಸ್ತರಿಸಲು CPSU ಗಳನ್ನು ಉತ್ತೇಜಿಸುವುದು.
  • # ಕಾರವಾರ ನೌಕಾ ವಿಮಾನ ನಿಲ್ದಾಣದ ರನ್ ವೇಯನ್ನು 2000ಮೀ.ನಿಂದ 2,700ಮೀ.ವರೆಗೆ ವಿಸ್ತರಿಸುವುದು.
    # ರಾಜ್ಯವು ಏರೋಸ್ಪೇಸ್ ಮತ್ತು ರಕ್ಷಣಾ ವಲಯದ ಉತ್ಪಾದನೆ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಹಲವು ದಶಕಗಳಿಂದ ದೇಶಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಅದನ್ನು ಮತ್ತಷ್ಟು ಸಶಕ್ತಗೊಳಿಸಲಾಗುತ್ತಿದೆ ಎಂದಿದ್ದಾರೆ.

GIM2025 ಭಾಗವಹಿಸುವಂತೆ ಸಿಂಗಾಪುರ್ ಹೈ ಕಮಿಷನರ್‌ಗೆ ಆಹ್ವಾನ: ಹೂಡಿಕೆದಾರರನ್ನು ನಮ್ಮ ರಾಜ್ಯದತ್ತ ಆಕರ್ಷಿಸುವ ಮತ್ತು #GIM2025 ರಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಇಂದಿನಿಂದ ನವದೆಹಲಿ ಪ್ರವಾಸ ಆರಂಭಿಸಿದ್ದು, ಸಿಂಗಾಪುರ್ ಹೈ ಕಮಿಷನರ್ ಸೈಮನ್ ವಾಂಗ್ ವೈ ಕುಯೆನ್ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು, ಈ ಸಂದರ್ಭದಲ್ಲಿ ಸೆಮಿಕಂಡಕ್ಟರ್‌ಗಳು, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ ಮತ್ತು ಸಿಂಗಾಪುರದ ನಡುವಿನ ಇತ್ತೀಚಿನ ಒಪ್ಪಂದದ ಬಗೆಗೂ ಚರ್ಚಿಸಿದೆವು ಎಂದಿದ್ದಾರೆ.