For the best experience, open
https://m.samyuktakarnataka.in
on your mobile browser.

ರಾಜ್ಯದ ವಿನಾಶಕಾಲಕ್ಕೆ ಬುನಾದಿ

01:49 PM Feb 16, 2024 IST | Samyukta Karnataka
ರಾಜ್ಯದ ವಿನಾಶಕಾಲಕ್ಕೆ ಬುನಾದಿ

ಬೆಂಗಳೂರು: ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದ್ದಾರೆ ಎಂದು ಹೆಚ್‌ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬಜೆಟ್ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಬಿಜೆಪಿ ಅವಧಿಯಲ್ಲಿ ಬೊಮ್ಮಾಯಿ ಬಜೆಟ್ ಮಂಡಿಸುವಾಗಿ ಹೂವು ಕಿವಿಗೆ ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಅ ಹೂವನ್ನ 7 ಕೋಟಿ ಜನರ ಕಿವಿಗೆ ಈಗ ಮುಡಿಸಿದ್ದಾರೆ.
ಸಿದ್ದರಾಮಯ್ಯಗೆ ಅನುಭವ, ಆಡಳಿತದ ಅನುಭವ ಇದೆ. ಆದರೆ ಅವರು ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ ಅಂತ. ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರ ಎಂದು ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ಆದರೆ ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದ್ದಾರೆ ಎಂದು ಹೆಚ್‌ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.