For the best experience, open
https://m.samyuktakarnataka.in
on your mobile browser.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್​​​..!

02:42 PM Sep 16, 2022 IST | Samyukta Karnataka
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್​​​

ಬೆಂಗಳೂರು : ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆ ಸರ್ಕಸ್ ಮಾಡಲಾಗುತ್ತಿದ್ದು, ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್​​​ ನಡೆಸಲಾಗಿದೆ.

ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದು, ಚುನಾವಣೆಗೆ ಪಕ್ಷ ಸಂಘಟಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಸಚಿವರಾದ ಕೆ.ಗೋಪಾಲಯ್ಯ, ಭೈರತಿ ಬಸವರಾಜ್ ಎಸ್.ಟಿ.ಸೋಮಶೇಖರ್, ಡಾ.ಅಶ್ವತ್ ನಾರಾಯಣ್​, ಮುನಿರತ್ನ ಸೇರಿ ಹಲವರು ಸಚಿವರು, ಮುಖಂಡರು ಭಾಗಿಯಾಗಿದ್ದಾರೆ. ಮೈಸೂರಿನಲ್ಲಿ ಎಸ್​ಟಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ.