For the best experience, open
https://m.samyuktakarnataka.in
on your mobile browser.

ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ

09:04 PM Jan 14, 2024 IST | Samyukta Karnataka
ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ

ಶಿವಮೊಗ್ಗ: ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರು ನಿಮಿಷಕ್ಕೊಂದು ಮಾತನಾಡ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ. 22ರ ನಂತರ ಹೋಗ್ತೀನಿ ಅಂತಾರೆ. ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟಿದ್ದಾರೆ.
ಅಲ್ಲದೇ ನೀವೇಕೆ ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮಮಂದಿರ ಅಂದುಕೊಳ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡ್ತಿಲ್ಲ. ಇಡೀ ವಿಶ್ವದ ಹಿಂದೂಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡ್ತಿದ್ದೇವೆ ಅಂತಾ ನೀವು ಹೇಳಿದ್ರೆ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.