For the best experience, open
https://m.samyuktakarnataka.in
on your mobile browser.

ರಾಮಮಂದಿರ ಸಂಭ್ರಮದಲ್ಲಿ ಅಲ್ಲಾಹು ಅಕ್ಬರ್‌ ಘೋಷಣೆ

02:49 PM Jan 22, 2024 IST | Samyukta Karnataka
ರಾಮಮಂದಿರ ಸಂಭ್ರಮದಲ್ಲಿ ಅಲ್ಲಾಹು ಅಕ್ಬರ್‌ ಘೋಷಣೆ

ಶಿವಮೊಗ್ಗ: ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೋರ್ವಳು ಅಲ್ಲಾಹು ಅಕ್ಬರ್‌ ಎಂದು ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಹಿಂದುಪರ ಸಂಘಟನೆಗಳು ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ರಸ್ತೆ ಮಧ್ಯೆ ನಿಂತು ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ಸಂಚಾರಕ್ಕೆ ಅಡಚಣೆಯಾಗುತ್ತದೆ ಎಂದು ಪೊಲೀಸರು ಮುಂದೆ ಹೋಗುವಂತೆ ಸೂಚಿಸಿದ್ದಾರೆ. ಇದರಿಂದ ಸಿಟ್ಟಾದ ಮಹಿಳೆ ಪೊಲೀಸರಿಗೆ ಅವಾಜ್‌ ಹಾಕಿದ್ದಾಳೆ. ಅಲ್ಲದೇ ಜೈಶ್ರೀರಾಮ ಎಂಬ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್‌ ಘೋಷಣೆ ಕೂಗಿದ್ದು, ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಪೊಲೀಸರು ಆಕೆಯನ್ನು ಕೋಟೆ ಪೊಲೀಸ್‌ ಠಾಣೆಗೆ ಕರೆದೊಯ್ದರು.