For the best experience, open
https://m.samyuktakarnataka.in
on your mobile browser.

ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಂಪನ್ನ

01:29 PM Jan 22, 2024 IST | Samyukta Karnataka
ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಂಪನ್ನ

ಅಯೋಧ್ಯೆ ಶ್ರೀರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಂಪನ್ನಗೊಂಡಿದ್ದು, ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ವಿರಾಜಮಾನನಾಗಿದ್ದಾನೆ.
ಮಧ್ಯಾಹ್ನ 12.20ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು, 12:45ರವರೆಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದರು. ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು, ಚಿತ್ರನಟರು, ಸಂಗೀತಗಾರರು, ನಾಯಕರು ಸೇರಿದಂತೆ ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೋಟ್ಯಂತರ ಭಕ್ತರು ಅಯೋಧ್ಯೆ ರಾಮನನ್ನು ಕಣ್ತುಂಬಿಕೊಂಡಿದ್ದಾರೆ. ಜತೆಗೆ ಇಡೀ ದೇಶವೇ ಇಂದು ಹಬ್ಬದಂತೆ ಆಚರಣೆ ಮಾಡುತ್ತಿದೆ.