ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಯರ ಆರಾಧನೆಯಲ್ಲಿ ಯದುವೀರ್ ಒಡೆಯರ್ ಭಾಗಿ

01:29 PM Aug 22, 2024 IST | Samyukta Karnataka

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದಲ್ಲಿ ಮೈಸೂರು ರಾಜ ಮನೆತನದ ಶ್ರೀ ಯದುವೀರ್ ಒಡೆಯರ್ ಪಾಲ್ಗೊಂಡರು.

ಬುಧವಾರ ರಾತ್ರಿ ಆಗಮಿಸಿದ ಅವರನ್ನು ಶ್ರೀಮಠದಿಂದ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲಿಗೆ ಗ್ರಾಮದೇವಿ ಮಂಚಾಲಮ್ಮ ಹಾಗೂ ರಾಯರ ಬೃಂದಾವನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ರಾಯರ ಬೃಂದಾವನ ಸುತ್ತಲಿನ ಶಿಲಾಮಂಟಪಕ್ಕೆ ಅಳವಡಿಸುತ್ತಿರುವ ಸ್ವರ್ಣಕವಚವನ್ನು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹಾಗೂ ಯದುವೀರ್ ಒಡೆಯರ್ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಬಳಿಕ ಮಠದಲ್ಲಿ ನಡೆದ ಪ್ರಹ್ಲಾದರಾಜರ ಗಜವಾಹನೋತ್ಸವದಲ್ಲಿ ಪಾಲ್ಗೊಂಡು ಪ್ರಹ್ಲಾದರಾಜರಿಗೆ ಚಾಮರ ಸೇವೆ ಮಾಡಿದರು.

Tags :
#ಮಂತ್ರಾಲಯ
Next Article