For the best experience, open
https://m.samyuktakarnataka.in
on your mobile browser.

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ

12:42 PM Feb 06, 2024 IST | Samyukta Karnataka
ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ

ಚಿಕ್ಕಮಗಳೂರು:ರಾಷ್ಟ್ರಮಟ್ಟದ ಕಬ್ಬಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಆದರೆ ಚಿಕಿತ್ಸೆ ಫಲಿಸ ದೆ ಮೃತಪಟ್ಟಿದ್ದಾನೆ.
ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗ ಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ,ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ.
ಹೀಗಾಗಿ ಯುವತಿ ಮನೆಯ ವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆ ಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು.
ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ.
ಮದುವೆಯಾದ ಮೂರೇ ದಿನ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿ ದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.