For the best experience, open
https://m.samyuktakarnataka.in
on your mobile browser.

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ

01:54 PM Jan 09, 2024 IST | Samyukta Karnataka
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ರಾಜತಾಂತ್ರಿಕ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಷಟ್ಲರ್‌ಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ 2023ರಲ್ಲಿ ಬ್ಯಾಡ್ಮಿಂಟ್‌ನ್‌ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಾಗಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಸ್ತುತ ಮಲೇಷ್ಯಾ ಓಪನ್ ಸೂಪರ್ 1000 ನಲ್ಲಿ ಸ್ಪರ್ಧಿಸುತ್ತಿರುವ ಇಬ್ಬರೂ ಅಥ್ಲೀಟ್‌ಗಳು ಸಮಾರಂಭಕ್ಕೆ ಗೈರುಹಾಜರಾಗಿದ್ದರು. ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರಿಯಲ್ಲಿ ಉದಯಿಸಿದ ತಾರೆ ಶೀತಲ್ ದೇವಿ ಸೇರಿದಂತೆ 26 ಸಾಧಕರಿಗೆ ಅರ್ಜುನ ಪ್ರಶಸ್ತಿ ನೀಡಲಾಯಿತು. ಮಹಾವೀರ್ ಪ್ರಸಾದ್ ಸೈನಿ ಮತ್ತು ಇ.ಭಾಸ್ಕರನ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.