ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಹುಲ್ ಗಾಂಧಿಗೆ ದೇಗುಲಕ್ಕೆ ನೋ ಎಂಟ್ರಿ!

12:12 PM Jan 22, 2024 IST | Samyukta Karnataka

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ರಾಜ್ಯದ ದೇಗುಲವೊಂದರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ.
15ನೇ ಶತಮಾನದ ಸತ್ರಾ ದೇಗುಲಕ್ಕೆ ರಾಹುಲ್ ಗಾಂಧಿ ತೆರಳಿದ್ದರು. ಆದರೆ, ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶ ಮಾಡೋದಕ್ಕೆ ಅವಕಾಶ ಸಿಗಲಿಲ್ಲ. ಈ ವೇಳೆ ದೇಗುಲ ಆಡಳಿತ ಮಂಡಳಿಗೆ ಪ್ರಶ್ನೆ ಮಾಡಿದ ರಾಹುಲ್ ಗಾಂಧಿ, ನನಗೆ ನಿರ್ಬಂಧ ವಿಧಿಸಿರೋದು ಏಕೆ ಎಂದು ಪ್ರಶ್ನಿಸಿದರು. ನಾವು ದೇಗುಲಕ್ಕೆ ಭೇಟಿ ನೀಡಲು ಬಯಸಿದ್ದೇವೆ. ಆದರೆ, ನಮಗೆ ಅವಕಾಶ ನೀಡುತ್ತಿಲ್ಲ. ನಾವು ಮಾಡಿದ ಅಪರಾಧವಾದ್ರೂ ಏನು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಜನವರಿ 11 ರಂದು ದೇಗುಲಕ್ಕೆ ಭೇಟಿ ನೀಡುವಂತೆ ನನಗೆ ಆಹ್ವಾನ ಬಂದಿತ್ತು, ಆದರೆ ನಾವು ಇಂದು ಇಲ್ಲಿಗೆ ಬಂದಾಗ, ನನಗೆ ಭೇಟಿ ನೀಡಲು ಅವಕಾಶ ನೀಡಲಿಲ್ಲ, ಉಳಿದವರೆಲ್ಲರೂ ಅಲ್ಲಿಗೆ ಹೋಗಬಹುದು ಆದರೆ ನನಗೆ ಅವಕಾಶವಿಲ್ಲ ಎಂದು ರಾಹುಲ್ ಅವರು ಪ್ರವೇಶ ನಿರಾಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

Next Article