ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರೈತರ ಹೋರಾಟ ಹತ್ತಿಕ್ಕುತ್ತಿಲ್ಲ

12:28 PM Feb 14, 2024 IST | Samyukta Karnataka

ಹುಬ್ಬಳ್ಳಿ: ದೆಹಲಿಯಲ್ಲಿ ವಿವಿಧ ಬೇಡಿಕೆ‌ ಈಡೇರಿಸಲು ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೃಷಿ ಸಚಿವ ಮುಂಡಾ ಅವರು ರೈತರ ಸಂಘಟನೆ ಜೊತೆ ಮಾತನಾಡಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದು, ನಮ್ಮ ಸರ್ಕಾರ ಸಹಾನಭೂತಿಯಿಂದ ರೈತರ ಬೇಡಿಕೆ ಪರಿಶೀಲನೆ ಮಾಡುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಪ್ರತಿಭಟನೆಗೆ ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ರೈತರೊಂದಿಗೆ ನಾವು ಸಹಾನುಭೂತಿ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ನನ್ನ ಗೆಲುವು ಖಚಿತ. ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆ ಈವರೆಗೂ ಆಗಿಲ್ಲ. ಈಗ ಮಾತಾಡೋದು ಕೇವಲ ಉಹಾಪೋಹ ಅಷ್ಟೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೀತಿದೆ. ಅದೆಲ್ಲವೂ ಅಪೂರ್ಣವಾಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು.

Next Article