For the best experience, open
https://m.samyuktakarnataka.in
on your mobile browser.

ಲಂಚ ಪಡೆಯುತ್ತಿದ್ದ ಪಿಎಸ್‌ಐ ಸೇರಿ ಮೂವರು ಪೊಲೀಸರು ಲೋಕಾ ಬಲೆಗೆ

11:00 PM May 01, 2023 IST | Samyukta Karnataka
ಲಂಚ ಪಡೆಯುತ್ತಿದ್ದ ಪಿಎಸ್‌ಐ ಸೇರಿ ಮೂವರು ಪೊಲೀಸರು ಲೋಕಾ ಬಲೆಗೆ

ಗದಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಲಂಚ ಪಡೆಯುತ್ತಿದ್ದ ಪಿಎಸ್​ಐ ಸಹಿತ ಮೂವರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಎಸ್ ಮತ್ತು ಪೊಲೀಸ್ ಪೇದೆಗಳಾದ ಶರಣಪ್ಪ ಭಜಂತ್ರಿ ಹಾಗೂ ಮಲ್ಲು ಕುರಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಕುರಿತಂತೆ ಮೂವರು ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡಲು ಪಿಎಸ್​ಐ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ವಿನಾಯಕ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿ ಲಂಚದ ಹಣದ ಪೈಕಿ 1 ಲಕ್ಷ ನೀಡಲು ಪಟ್ಟಣದಲ್ಲಿರುವ ಧಾಬಾಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಲಂಚ ಪಡೆಯುತ್ತಿದ್ದ ಪಿಎಸ್​ಐ ಸಹಿತ ಮೂವರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.