ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲಂಚ ಸ್ವೀಕಾರ: ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ

05:38 PM Oct 21, 2023 IST | Samyukta Karnataka

ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿಗೆ ಬಿಲ್ ಮೊತ್ತದ ಶೇ. ೧೫ ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
೨೦೨೨-೨೩ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಡಬ್ಲುಡಿಸಿ ೨೦” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ ಗಿಡಗಳನ್ನು ನೀಡಲಾಗಿತ್ತು. ಇದನ್ನು ಕೆಲವು ನರ್ಸರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು, ಅಲ್ಲದೆ ಅರಣ್ಯ ಇಲಾಖೆ ಗುತ್ತಿಗೆದಾರರಿಂದ ಗಿಡಗಳನ್ನು ನಾಟಿ ಮಾಡಿಸಿತ್ತು. ಈ ಒಟ್ಟಾರೆ ಕಾಮಗಾರಿಗೆ ೫೦ ಲಕ್ಷದಷ್ಟು ಹಣ ಸರಕಾರದಿಂದ ಬರಬೇಕಾಗಿತ್ತು.
ಈ ಹಿನ್ನಲೆ ಕೃಷಿ ಇಲಾಖೆಯಲ್ಲಿ ಅಂದು ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ಪರಮೇಶ್ ಎನ್.ಪಿ ಅವರು ಬಿಲ್ ಬಾಕಿ ಪಾವತಿಗೆ ಮಂಗಳೂರು ವಿಭಾಗದ ಉಪಕೃಷಿ ನಿರ್ದೇಶಕಿ ಭಾರತಮ್ಮ ಅವರಲ್ಲಿ ಕೇಳಿಕೊಂಡಿದ್ದಾರೆ. ಈ ವೇಳೆ ಅಧಿಕಾರಿ ಭಾರತಮ್ಮ ಅವರು ಬಿಲ್ ಪಾವತಿಸಬೇಕಾದರೆ ಬಿಲ್ ಮೊತ್ತದ ಶೇ. ೧೫ರಷ್ಟು ನಗದನ್ನು ಮುಂಗಡವಾಗಿ ನನಗೆ ಲಂಚದ ರೂಪದಲ್ಲಿ ನೀಡಬೇಕು ಇಲ್ಲವಾದರೇ ನಾನು ಬಿಲ್ ಪಾವತಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪರಮೇಶ್ ಅ.೨೦ ರಂದು ಮತ್ತೆ ಅಧಿಕಾರಿ ಭಾರತಮ್ಮ ಅವರ ಹತ್ತಿರ ಮಾತನಾಡಿದಾಗ ಬಿಲ್ ಪಾವತಿಗೆ ೧ ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಭಾರತಮ್ಮರವರು ಪರಮೇಶ್ ಅವರಿಂದ ೧ ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Next Article